ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವು…

ಬೆಂಗಳೂರು,ನವೆಂಬರ್,6,2020(www.justkannada.in):  ನಿನ್ನೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಪೂರಂಪೂಜಾರಿ(19) ಮೃತಪಟ್ಟ ಕಾರ್ಮಿಕ. ಇಸ್ಕಾನ್ ಬಳಿ ಖಾಸಗಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದಿದ್ದು ಈ ವೇಳೆ ಪೂರಂಪೂಜಾರಿ ಮೃತಪಟ್ಟಿದ್ಧಾನೆ.wall-collapses-rain-workers-die

ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Wall -collapses –rain- workers- die