ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? : ಸಿದ್ದರಾಮಯ್ಯ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು,ಡಿಸೆಂಬರ್,19,2020(www.justkannada.in) : ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು ಎಂದು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.Teachers,solve,problems,Government,bound,Minister,R.Ashokಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತುರನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

When-your-introspection?-When-Congress- leaving?-Siddaramaiah-H.D.Kumaraswamy-Question

2018ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ.

When-your-introspection?-When-Congress- leaving?-Siddaramaiah-H.D.Kumaraswamy-Question

ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

key words : When-your-introspection?-When-Congress- leaving?-Siddaramaiah-H.D.Kumaraswamy-Question