ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ನಟ ದರ್ಶನ್ ಮನೆಗೆ ಬಂದು ‘ಲಾಕ್’ ಆದ ಮಹಿಳೆ !

kannada t-shirts

ಮೈಸೂರು, ಜುಲೈ 11, 2021 (www.justkannada.in): ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ನಟ ದರ್ಶನ್ ಬಳಿ ತೆರಳಿದ್ದ ಮಹಿಳೆಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಲೋನ್ ವಿಚಾರವಾಗಿ ಮಾತನಾಡಲು ತೆರಳಿದ್ದ ಮಹಿಳೆ. ನಾನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದರು. ನಿಮ್ಮ ಸ್ನೇಹಿತರು ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದೇನೆ ಎಂದು ಆ ಮಹಿಳೆ ಹೇಳಿದ್ದರು.

ನಿರ್ಮಾಪಕ ಉಮಾಪತಿ ಹಾಗೂ ಶ್ರೀನಿವಾಸ ಗೌಡ ಜೊತೆ ಬಂದಿದ್ದ ಮಹಿಳೆ ಎನ್ನಲಾಗಿದ್ದು, ಮೈಸೂರಿನ ಕೆಲ ದರ್ಶನ್ ಸ್ನೇಹಿತರು 25 ಕೋಟಿ ಲೋನ್‌ಗೆ ಅರ್ಜಿ ಹಾಕಿದ್ದಾರೆ ಎಂದು ಹೇಳಿದ್ದರು ಎನ್ನಲಾಗಿದೆ.

ಈ ಸಂಬಂಧ ದರ್ಶನ್ ಸ್ನೇಹಿತರು ಹೆಬ್ಬಾಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದಾರೆ. ಸದ್ಯ ಎನ್ ಆರ್ ಎಸಿಪಿ ಕಚೇರಿಗೆ ಆಗಮಿಸಿದ ನಟ ದರ್ಶನ್ ಜತೆಗೆ ಈಗಾಗಲೇ ಉಮಾಪತಿ ಹಾಗೂ ಶ್ರೀನಿವಾಸ್ ಗೌಡರನ್ನು ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ.

ನಕಲಿ ಮ್ಯಾನೇಜರ್ ಬಗ್ಗೆ ಮಾಹಿತಿ ಪಡೆಯುತ್ತಿರುವ ಪೊಲೀಸರು. ಖುದ್ದು ಡಿಸಿಪಿ ಪ್ರದೀಪ್ ಗುಂಠಿಯಿಂದ ತನಿಖೆ ನಡೆಯುತ್ತಿದೆ. ಎಸಿಪಿ ಶಿವಶಂಕರ್ ಸಹ ಉಪಸ್ಥಿತರಿದ್ದಾರೆ. ವಿಚಾರಣೆ ವೇಳೆ ಉಮಾಪತಿ ಹೇಳಿದ ಕಾರಣ ದರ್ಶನ ಬಳಿ ಬಂದು ಈ ರೀತಿ ಮಾಡಿದೆ ಎಂದು ಆ ಮಹಿಳೆ ಹೇಳಿದ್ದಾರೆ. ಈ ರೀತಿ ಉಮಾಪತಿ ಯಾವ ಕಾರಣಕ್ಕೆ ಮಾಡಿದರು ಅನ್ನೋ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಪೊಲೀಸರು ಹಾಗೂ ದರ್ಶನ್ ವಿಚಾರಣೆ ನಂತರ ಹೊರಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಳಿಕ ಖಚಿತ ವಿಷಯ ಗೊತ್ತಾಗಲಿದೆ.

website developers in mysore