ಹಿರಿಯ ಕವಿ, ಡಾ. ಸಿದ್ಧಲಿಂಗಯ್ಯ ಇನ್ನಿಲ್ಲ.

ಬೆಂಗಳೂರು,ಜೂನ್,11,2021(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಮೃತಪಟ್ಟಿದ್ದಾರೆ.jk

ಕಳೆದ ಕೆಲ ದಿನಗಳ ಹಿಂದೆ  ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧಲಿಂಗಯ್ಯ ಅವರು  ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾಹಿತಿ ಸಿದ್ಧಲಿಂಗಯ್ಯ ಅವರು ಇಂದು ನಿಧನರಾಗಿದ್ದಾರೆ.

ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ. ದಲಿತ ಕವಿ ಎಂದೇ ಪ್ರಸಿದ್ಧಿಯಾಗಿದ್ದ ಸಿದ್ಧಲಿಂಗಯ್ಯ ಅವರು 81ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

 

Key words: writer- Dr.siddalingiah-no more-corona