ಡಿಸಿಎಂ ಜತೆ ತಿರುನಲ್ಲೂರು ಶನೇಶ್ವರ ದೇಗುಲಕ್ಕೆ ಯಶ್ ಭೇಟಿ

ಚೆನ್ನೈ, ಜನವರಿ 03, 2020 (www.justkannada.in): ರಾಕಿಂಗ್ ಸ್ಟಾರ್ ಯಶ್ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಹೌದು. ಕೆಜಿಎಫ್-2 ಚಿತ್ರೀಕರಣದ ಬಿಡುವಿನ ವೇಳೆ ತಿರುನಲ್ಲೂರು ದೇವಸ್ಥಾನಕ್ಕೆ ಯಶ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಎಂದರೆ ರಾಕಿಂಗ್ ಸ್ಟಾರ್ ಯಶ್ ಜೊತೆ ಡಿಸಿಎಂ ಅಶ್ವತ್ಥ ನಾರಾಯಣ್ ಕೂಡ ದೇವಾಲಯಕ್ಕೆ ಭೇಟಿ ನೀಡಿದ್ದರು.