ಮತ್ತೆ ಸಂಕಷ್ಟ: ದೆಹಲಿಗೆ ಬರುವಂತೆ ಜಮೀರ್ ಅಹ್ಮದ್ ಖಾನ್ ಗೆ ಇಡಿ ಸೂಚನೆ

kannada t-shirts

ಬೆಂಗಳೂರು, ಆಗಸ್ಟ್ 07, 2021 (www.justkannada.in): ದೆಹಲಿಗೆ ಬರುವಂತೆ ಜಮೀರ್ ಅಹ್ಮದ್ ಖಾನ್ ಗೆ ಇಡಿಯಿಂದ ಸೂಚನೆ ಬಂದಿದೆ.

ಹೌದು. ಜಾರಿ ನಿರ್ದೇಶನಾಲಯ (ED) ದಾಳಿ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ಎದುರಾಗಿದೆ.

ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಇಡಿ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ಅವರಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ದಾಳಿ ನಡೆಸಿತ್ತು.

website developers in mysore