Sunday, August 2, 2026

BDA Apartments

Home Front Page ಮಣ್ಣಲ್ಲಿ ಮಣ್ಣಾದ ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ.

ಮಣ್ಣಲ್ಲಿ ಮಣ್ಣಾದ ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ.

ದೇವನಹಳ್ಳಿ,ಡಿಸೆಂಬರ್,18,2021(www.justkannada.in):  ಅನಾರೋಗ್ಯದಿಂದ  ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ  ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಾಲೇಜು ಆವರಣದಲ್ಲಿ ಈಡಿಗರ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಕೇಂಧ್ರ ಸಚುವ ಆರ್.ಎಲ್ ಜಾಲಪ್ಪ ಅವರ ಅಂತ್ಯಕ್ರಿಯೆ ನಡೆಯಿತು. ಪೊಲೀಸ್ ಬ್ಯಾಂಡ್ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಾಲಪ್ಪ ಅವರ ಹಿರಿಯ ಮಗ ಜೆ ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಆರೋಗ್ಯ ಇಲಾಖೆ ಸಚಿವ ಕೆ ಸುಧಾಕರ್ ಸೇರಿ ಹಲವರು ಭಾಗಿಯಾಗಿದ್ದರು.

Key words: funeral – former Union Minister- RL Jalappa-bangalore