ಇಂದು ಜಮ್ಮುವಿನಲ್ಲಿ ಗುಲಾಂ ನಬಿ ಆಜಾದ್ ಸಮಾವೇಶ: ಹೊಸ ಪಕ್ಷ ಘೋಷಣೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): ಗುಲಾಂ ನಬಿ ಆಜಾದ್ ಇಂದು ಜಮ್ಮುವಿನಲ್ಲಿ ಸಮಾವೇಶ ನಡೆಸಲಿದ್ದು, ಹೊಸ ಪಕ್ಷದೊಂದಿಗೆ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ ಕಾಂಗ್ರೆಸ್ ತೊರೆದ ಹಿರಿಯ ರಾಜಕಾರಣಿ ಇದೀಗ ತಮ್ಮದೇ ಪಕ್ಷದ ಮೂಲಕ ರಾಜಕೀಯ ಹೊಸ ಅಧ್ಯಾಯ ಆರಂಭಿಸಲಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಒಂದು ವಾರದ ಹಿಂದೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆಗೆ ರಾಹುಲ್ ಗಾಂಧಿ ಕಾರಣ ಎಂದು ಟೀಕಿಸಿದ್ದರು.

ಇಂದಿನ ಸಮಾವೇಶದಲ್ಲಿ ಗುಲಾಂ ನಬಿ ಆಜಾದ್ ತಮ್ಮ ಹೊಸ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಶೀಘ್ರದಲ್ಲೇ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ.