ನಗರ ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ನೌಕರರಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್!

ಬೆಂಗಳೂರು, ಜೂನ್ 18, 2023 (www.justkannada.in): ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ನೌಕರರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಿರುವ ಶೇ.17ರಷ್ಟು ತಾತ್ಕಾಲಿಕ ಪರಿಹಾರವನ್ನು ಸ್ಥಳೀಯ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳು, ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸುವ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಮಹತ್ವದ ಸ್ಪಷ್ಠೀಕರಣವನ್ನು ಯೋಜನಾ ನಿರ್ದೇಶಕರಿಗೆ ನೀಡಿದ್ದಾರೆ.

ಯೋಜನಾ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ರಾಜ್ಯ ಸರ್ಕಾರ 7ನೇ ರಾಜ್ಯ ವೇತನದ ಆಯೋಗದ ವರದಿಯನ್ನು ಕಾಯ್ದಿರಿಸಿ, ದಿನಾಂಕ 01-03-2023ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ, ನಿವೃತ್ತ ನೌಕರರಿಗೆ ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಮೂಲ ವೇತನದ, ಮೂಲ ಪಿಂಚಮಿಯ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿರುತ್ತದೆ.

ಈ ಆದೇಶದಂತೆ ರಾಜ್ಯ ಸರ್ಕಾರಿ ನೌಕರರಿಗೆ, ನಿವೃತ್ತ ನೌಕರರಿಗೆ ತಾತ್ಕಾಲಿಕ ಪರಿಹಾರ ಭತ್ಯೆಯನ್ನು ಮಂಜೂರು ಮಾಡಿ, ಹೊರಡಿಸಲಾದ ಉಲ್ಲೇಖಿತ ಆದೇಶದ ಕಂಡಿಕೆ 5 ಮತ್ತು 6ರ ಅವಕಾಶಗಳ ಕಡೆ ಗಮನ ಸೆಳೆಯುತ್ತಾ ಈ ಕೆಳಕಂಡ ಸ್ಪಷ್ಟೀಕರಣವನ್ನು ನೀಡಿದ್ದಾರೆ.

ಗುತ್ತಿಗೆ ಹಾಗೂ ಹೊರ ಗುತ್ತಿಗೆ, ತಾತ್ಕಾಲಿಕ ನೇಮಕಾತಿಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಾಗೂ ಯುಜಿಸಿ, ಐಸಿಎಆರ್, ಎಐಸಿಟಿಇ ವೇತನ ಶ್ರೇಣಿ ಕಾರ್ಯನಿರತ ನೌಕರರುಗಳಿಗೆ ಉಲ್ಲೇಖಿತ ಆದೇಶವು ಅನ್ವಯಿಸುವುದಿಲ್ಲ.