ತಮಿಳುನಾಡಿಗೆ ನೀರು ಬಿಟ್ಟಿಲ್ಲಅಂತಾ ಹೇಳಿ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ-ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಸೆಪ್ಟಂಬರ್,21,2023(www.justkannada.in): ತಮಿಳುನಾಡಿಗೆ ನೀರು ಬಿಡುತ್ತಿದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ  ನೀರು ಬಿಟ್ಟಿಲ್ಲ ಅಂತಾ ಹೇಳಿ ಜನರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ಹೇಳಿದ್ದಕ್ಕಿಂತ ಹೆಚ್ಚಿನ ನೀರು ಬಿಟ್ಟಿದ್ದಾರೆಂಬ ಮಾಹಿತಿ ಇದೆ. ಆದರೆ ನಾವು ನೀರು ಬಿಡುತ್ತಿಲ್ಲ ಅಂತ  ಜನರನ್ನ ದಾರಿ ತಪ್ಪಿಸುತ್ತಿದ್ದಾರೆ.   ಕೋರ್ಟ್ ನಲ್ಲಿ ನೀರು ಬಿಟ್ಟಿದ್ದೇವೆ   ಅಂತಲೂ ಹೇಳುತ್ತಾರೆ. ಮುಂದೆ ಏನಾಗುತ್ತೆ ಅನ್ನೋದನ್ನೋ ನೋಡೋಣ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್  ಮೈತ್ರಿ ವಿಚಾರವಾಗಿ ನಾಳೆ ಮಾತನಾಡುತ್ತೇನೆ. ಎಷ್ಟು ಸೀಟ್ ಅಂತಾ ನಾವು ಚರ್ಚಿಸಿಲ್ಲ ಬಿಜೆಪಿಯೂ ಚಿಂತಿಸಿಲ್ಲ 28 ಕ್ಷೇತ್ರದ ಇಂದಿನ ಪರಿಸ್ಥಿತಿ ಅವಲೋಕಿಸಿ ಚರ್ಚಿಸುತ್ತೇವೆ.  ಮೈತ್ರಿ ವಿಚಾರವಾಗಿ  ಜೆ.ಪಿ ನಡ್ಡಾ, ಅಮಿತ್ ಶಾ ಜೊತೆ ಚರ್ಚಿಸುತ್ತೇವೆ. ಅಗತ್ಯವಿದ್ದರೇ ಮೋದಿ ದೇವೆಗೌಡರು ಚರ್ಚೆ ಮಾಡುತ್ತಾರೆ ಎಂದು ಹೇಳಿದರು.

Key words:  government -misleading – people –covery-issue-Former CM-H.D.kumaraswamy