ಆರ್ ಎಸ್ ಎಸ್ ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ತಡೆ ನೀಡಿದ ಸರ್ಕಾರ.

ಬೆಂಗಳೂರು, ಜುಲೈ 14,2023(www.justkannada.in):  ಆರ್​ ಆರ್​ ಎಸ್ ​ಗೆ ಕಾಂಗ್ರೆಸ್​ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ ಎಸ್ ಎಸ್ ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ  ರಾಜ್ಯ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ.

ಬೆಂಗಳೂರಿನ ತಾವರಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್​ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ, ಇದೀಗ ಕಾಂಗ್ರೆಸ್​ ಸರ್ಕಾರ ತಡೆ ಹಿಡಿದಿದೆ. ಕಾಂಗ್ರೆಸ್​ ಸರ್ಕಾರ ಬಂದ ಒಂದೇ ವಾರಕ್ಕೆ ಭೂಮಿ ಹಸ್ತಾಂತರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ಈ ಬಗ್ಗೆ ಇಂದು ಸದನದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಲಿಖಿತ ಉತ್ತರ ನೀಡಿದರು.ses

ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ-ಸಂಸ್ಥೆಗಳಿಗೆ ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಸೋಮಶೇಖರ್​ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್​ಗೆ ನೀಡಲಾಗಿದ್ದ 35 ಎಕರೆ 33 ಗುಂಟೆ ಭೂಮಿಯನ್ನು ತಡೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.

Key words: government –stay-  transfer – land-allotted – RSS.