ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

ಬೆಂಗಳೂರು, ಆಗಸ್ಟ್ 23, 2020 (www.justkannada.in): ಸ್ಥಗಿತಗೊಂಡಿದ್ದ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಗೊಳ್ಳಲಿದೆ.

ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯವನ್ನು ಪ್ರಕಟಿಸಿದ್ದಾರೆ.  ಶೂಟಿಂಗ್‌ ಸೆಟ್‌ಗೆ ಬರುವ ಮೊದಲು ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು. ರೋಗದ ಯಾವುದೇ ಲಕ್ಷಣವಿಲ್ಲದವರು ಮಾತ್ರ ಸೆಟ್ ಒಳಗೆ ಹೋಗಬಹುದು. ಶೀಘ್ರವೇ ಈ ಕುರಿತು ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.