ರಾಜ್ಯಸಭೆಗೆ ಸ್ಪರ್ಧಿಸಲು ಹೆಚ್.ಡಿ ದೇವೇಗೌಡ ಅವರು ನಿರ್ಧಾರ: ನಾಳೆ ನಾಮಪತ್ರ ಸಲ್ಲಿಕೆ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಜೂ,8,2020(www.justkannada.in): ರಾಜ್ಯಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

 ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು  ತಿಳಿಸಿದ್ದಾರೆ.

ಹಾಗೆಯೇ ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ, ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

Key words: HD Deve Gowda- decision – contest- Rajya Sabha-Former CM- HD Kumaraswamy.