ಹೆಚ್.ಡಿ ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ- ಸಿಎಂ ಸಿದ್ದರಾಮಯ್ಯ ಆರೋಪ.

ಯಾದಗಿರಿ, ಮೇ 1,2024 (www.justkannada.in): ಹೆಚ್.ಡಿ ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು  ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು  ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ..? ಎಸ್ ಐಟಿಯಿಂದ ಪಾರದರ್ಶಕವಾಗಿ ತನಿಖೆಯಾಗುತ್ತೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದವನಿಗೆ ಯಾಕೆ ಟಿಕೆಟ್ ಕೊಟ್ಟರು. ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಸಂಬಂಧ ಇಲ್ಲ ಎಂದರು.

Key words: HD Deve Gowda, Prajwal Revanna, CM Siddaramaiah