Thursday, September 17, 2026

BDA Apartments

Home Front Page ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿಕೆ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ- ಖರ್ಗೆಗೆ ಕಾಂಗ್ರೆಸ್ ಮುಖಂಡರ ಮನವಿ.

ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿಕೆ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ- ಖರ್ಗೆಗೆ ಕಾಂಗ್ರೆಸ್ ಮುಖಂಡರ ಮನವಿ.

ನವದೆಹಲಿ,ಮಾರ್ಚ್,16,2023(www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿದರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಸ್ಪರ್ಧಿಸಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇಂದು ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಕಾಂಗ್ರೆಸ್ ಟಿಕೆಟ್ 16 ಆಕಾಂಕ್ಷಿಗಳು ಖರ್ಗೆಗೆ ಮನವಿ ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ. ಡಿಕೆ ಶಿವಕುಮಾರ್ ಸ್ಪರ್ಧಿಸದಿದ್ದರೇ ಮೂಲ ಕಾಂಗ್ರೆಸ್ಸಿಗರಿಗೆ ಆದ್ಯತೆ ನೀಡಿ ಎಂದು ಮಾಜಿ ಶಾಸನ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಅಮರಾವತಿ ಚಂದ್ರಶೇಖರ್ ಸತೀಶ್ ಗೌಡ ಸೇರಿ ಹಲವರು ಮನವಿ ಮಾಡಿದ್ದಾರೆ.ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿಕೆ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ dks

Key words: HD Kumaraswamy- contests – Mandya-DK Shivakumar-  Congress leaders –mallikajun kharge