ಸರಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ

ಬಳ್ಳಾರಿ, ಸೆಪ್ಟೆಂಬರ್ 15, 2019 (www.justkannada.in): ಆರೋಗ್ಯ ಸಚಿವ ಶ್ರೀರಾಮುಲು ಶೀಘ್ರವೇ ಸರಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಹೌದು. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಶೀಘ್ರದಲ್ಲಿಯೇ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದೇನೆ. ಈ ಮೂಲಕ 15 ದಿನಗಳ ಕಾಲಮಿತಿಯಲ್ಲಿ ಸಮಸ್ಯೆ ಸರಿ ಪಡಿಸಲು ಆಸ್ಪತ್ರೆಯ ಆಡಳಿತಾಧಿಕಾರಿಗಳಿಗೆ ಗಡುವು ನೀಡಲಿದ್ದೇನೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಹೊಸ ಹೆಜ್ಜೆಯಾಗಿ ಮೊದಲ ಬಾರಿಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನಾನು ವಾಸ್ತವ್ಯ ಹೂಡಿ, ಸಮಸ್ಯೆ ಬಗೆ ಹರಿಸಲು ಕ್ರಮ ಕೈಗೊಳ್ಳಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.