ಪಿರಿಯಾಪಟ್ಟಣದಲ್ಲಿ ಭಾರಿ ಮಳೆ: ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್….

ಮೈಸೂರು,ಆ,6,2020(www.justkannada.in):  ಮೈಸೂರು, ಕೊಡಗು ಸೇರಿ ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರಸಿದ್ದ ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್ ಆಗಿದೆ.

ಮಳೆರಾಯನ ಆರ್ಭಟದಿಂದಾಗಿ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದ್ದು ಈ ಹಿನ್ನೆಲೆ ಪಿರಿಯಾಪಟ್ಟಣದ ಕೊಪ್ಪ‌ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಜತೆಗ  ಪ್ರಸಿದ್ದ ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್ ಆಗಿದೆ. ಹೀಗಾಗಿ ಗೊಲ್ಡನ್ ಟೆಂಪಲ್ ತೆರಳಲು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.heavy-rains-mysore-periyapattina-bridge-golden-temple

ಭಾರಿ ಮಳೆಯಿಂದಾಗಿ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಭತ್ತದ ಗದ್ದೆಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ  ಉಂಟಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಒಟ್ಟಾರೆ ರಾಜ್ಯದಲ್ಲಿ  ಬೆಂಬಿಡದೆ ಸುರಿಯುತ್ತಿರುವ ವರುಣಾಘಾತಕ್ಕೆ  ಜನ ತತ್ತರಿಸಿದ್ದಾರೆ.

Key words: Heavy rains –mysore- Periyapattina-bridge – Golden Temple.