ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.

ಬೆಂಗಳೂರು,ಮೇ,2,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.

ಡಿ.ಕೆ ಶಿವಕುಮಾರ್ ಬೆಂಗಳೂರಿನ ಎಚ್ ಎಎಲ್ ನಿಂದ ಕೋಲಾರದ ಮುಳುಬಾಗಿಲಿಗೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್  ಗೆ ರಣಹದ್ದು ಬಡಿದಿದ್ದು ಹೆಲಿಕಾಫ್ಟರ್ ಮುಂಭಾಗದ ವಿಂಡೋ ಗಾಜು ಪುಡಿಪುಡಿಯಾಗಿದೆ.

ನಂತರ ಡಿಕೆ ಶಿವಕುಮಾರ್ ಹೆಚ್ ಎಎಲ್ ಗೆ ವಾಪಸ್ ಆಗಿದ್ದಾರೆ. ಸದ್ಯ ಹೆಲಿಕಾಪ್ಟರ್ ನಲ್ಲಿದ್ದ ಸಿಬ್ಬಂದಿ ಮತ್ತು ಡಿ.ಕೆ ಶಿವಕುಮಾರ್ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  helicopter – DK Shivakumar – traveling -emergency landing.