Wednesday, August 19, 2026

BDA Apartments

Home Front Page ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ  ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್  ತೀರ್ಪು ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ್ದು, ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲು ಸೂಚನೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು  ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ ಶಾಸಕ ಸುಬ್ಬಾರೆಡ್ಡಿ ಸಹ ಮುನಿರಾಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಕೋರ್ಟ್, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದರೆ, ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

Key words: High Court, invalidates, Congress MLA