ಬೆಂಗಳೂರು, ಜೂ.05,2025: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಸಿಲುಕಿ 12 ಮಂದಿ ಅಮಾಯಕ ಆರ್ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆ ಸಂಬಂಧ ರಾಜ್ಯ ಹೈಕೋರ್ಟ್ ಇಂದು ಮಧ್ಯಾಹ್ನ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಘಟನೆಗೆ ರಾಜ್ಯ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂಬ ವರದಿ ಬೆನ್ನಲ್ಲೇ ಇದೀಗ ಕೋರ್ಟ್ ಪ್ರಕರಣದ ವಿಚಾರಣೆಗೆ ಮುಂದಾಗಿದೆ. ಈ ದುರ್ಘಟನೆ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಅಥವಾ ಖುದ್ದು ನ್ಯಾಯಾಲಯವೇ ಸ್ವಯಂಪ್ರೇರಿತ ವಿಚಾರಣೆಗೆ ಮುಂದಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದುರ್ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು 46 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಬಹುತೇಕರು ಹದಿಹರೆಯದವರು ಎಂಬುದು ವಿಪರ್ಯಾಸ. ಸೂಕ್ತ ಮುಂಜಾಗ್ರತೆ ವಹಿಸದೆ ದೀಢಿರನೆ ಕಾರ್ಯಕ್ರಮ ಆಯೋಜಿಸಿದ್ದು ಸಹ ದುರ್ಘಟನೆಗೆ ಮೂಲ ಎಂಬ ಆರೋಪ ಕೇಳಿ ಬಂದಿದೆ.
ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಇಂದು ಮಧ್ಯಾಹ್ನ ಪ್ರಕರಣದ ವಿಚಾರಣೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.
key words: RCB, stampede incident, High Court, hear case, bangalore, karnatka
RCB stampede incident: High Court to hear case this afternoon