ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ಮೂಲಕ ಹೊಂಬಾಳೆ ಫಿಲ್ಮ್ಸ್’ನ ವಿಜಯ !

ಬೆಂಗಳೂರು, ಅಕ್ಟೋಬರ್ 14, 2022 (www.justkannada.in): ಕೆಜಿಎಫ್, ಕಾಂತಾರಾ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್  ಅವರನ್ನು ಭೇಟಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹಂಚಿಕೊಂಡಿರುವ ವಿಜಯ್ ಕಿರಗಂದೂರು, ಅನುರಾಗ್ ಠಾಕೂರ್ ಅವರನ್ನು ಭೇಟಿಯಾದದ್ದು ಸಂತಸ ತಂದಿದೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ನೆಲದ ಸಂಸ್ಕೃತಿಯ ಕಥೆಯನ್ನೊಳಗೊಂಡ ಮತ್ತಷ್ಟು ಚಿತ್ರಗಳನ್ನು ನಿರ್ಮಿಸುವ ಸಾಧ್ಯತೆಯ ಕುರಿತಾಗಿ ಚರ್ಚೆ ನಡೆಸಲಾಯಿತು ಎಂಬುದನ್ನು ಉಲ್ಲೇಖಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 1 ಮೂಲಕ ಮತ್ತೊಂದು ಇಂಡಸ್ಟ್ರಿ ಹಿಟ್ ನೀಡಿದ ವಿಜಯ್ ಯುವರತ್ನ, ಕೆಜಿಎಫ್ ಚಾಪ್ಟರ್ 2, ಇದೀಗ ಕಾಂತಾರ ಚಿತ್ರದ ಮೂಲಕ ಹೊಂಬಾಳೆ ಫಿಲ್ಮ್ಸ್ ಕೋಟಿ ಕೋಟಿ ಬಾಚುತ್ತಿದೆ.