Friday, September 11, 2026

BDA Apartments

Home Front Page ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ...

ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.

ಬೆಳಗಾವಿ,ಡಿಸೆಂಬರ್,21,2022(www.justkannada.in): ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಸಂಜಯ್ ರಾವತ್ ಹೇಳಿಕೆ ಖಂಡಿಸುತ್ತೇನೆ.  ಎರಡು ರಾಜ್ಯಗಳ  ಜನರ ನಡುವೆ ಬೆಂಕಿ ಇಡುವ ಹೇಳಿಕೆ ಇದು.   ರಾಜಕೀಯ ಮುಖಂಡರು ಸಂಯಮ ತೋರಬೇಕು.  ಕಾನೂನು ಸುವ್ಯವಸ್ಥೆಗೆ  ಭಂಗ ಆಗದಂತೆ ನೋಡಿಕೊಳ್ಳಬೇಕು. ಆದರೆ ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ. 

ಮಹಾರಾಷ್ಟ್ರ-ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ನಮಗೆ ಯಾರ ಅನುಮತಿ ಬೇಕಾಗಿಲ್ಲ , ಭಾರತಕ್ಕೆ ಚೀನಾ ನುಗ್ಗಿದಂತೆ ಬೆಳಗಾವಿಗೆ ನಾವು ನುಗ್ಗುತ್ತೇವೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಉದ್ಧಟತನದ ಹೇಳಿಕೆ ನೀಡಿದ್ದು ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗಿದೆ.

Key words: Home Minister- Araga  jnanendra -Shiv Sena –leader- Sanjay Rawat