ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ..

ಬೆಂಗಳೂರು,ಜುಲೈ,27,2023(www.justkannada.in):  ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ  ಕಾರ್ಯಕರ್ತರು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ  ಪ್ರತಿಭಟನೆ ನಡೆಸಲಿದರು.

ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ  ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್   ಹಾಕಿ ಪ್ರತಿಭಟನಾಕಾರರನ್ನ ತಡೆದಿದ್ದು,  ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು.

ಬಿಜೆಪಿ ಪ್ರತಿಭಟನೆ ಹಿನ್ನೆಲೆ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ  ಪೊಲೀಸ್ ಭದ್ರತೆ ವಹಿಸಲಾಗಿದ್ದು,  ಒಂದು ಕೆಎಸ್​ಆರ್​ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ

Key words: Home Minister- Dr. G. Parameshwar –residence- BJP workers-protest