ನಾಳೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನಾ ರ್ಯಾಲಿ…

ಬೆಂಗಳೂರು,ಮಾರ್ಚ್,1,2021(www.justkannada.in):  ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.jk

ಸೇವಾಹಿರಿತನದ ಮೇಲೆ ಗೌರವ ಧನ ಹೆಚ್ಚಳ, ಉಚಿತ ವೈದ್ಯಕೀಯ ಸೌಲಭ್ಯ ಅಥವಾ ಇಎಸ್ ಐ ಸೌಲಭ್ಯ, ಎಲ್ ಕೆಜಿ ಮತ್ತು ಯುಕೆಜಿಯನ್ನ ಅಂಗನವಾಡಿಯಲ್ಲೇ ಪ್ರಾರಂಭಿಸುವುದು. ಪಿಂಚಿಣಿ ಸೇವೆ ಸೇರಿ 7 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿಯಲಿದ್ದಾರೆ.

ಬೆಂಗಳೂರಿನ ಕೆಎಸ್ ಆರ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನಾರ್ಯಾಲಿ ನಡೆಸಲಿದ್ದಾರೆ.

Key words: Huge -protests -Anganwadi activists –tomorrow-bangalore