ಬಜೆಟ್​​ ನಲ್ಲಿ ಹೇಳಿದಂತೆ ಮಹದಾಯಿ ಯೋಜನೆ ಜಾರಿ ಮಾಡಿ-ಶಾಸಕ  ಎನ್​​.ಹೆಚ್​​​.ಕೋನರೆಡ್ಡಿ ಆಗ್ರಹ.

ಬೆಂಗಳೂರು,ಜುಲೈ,20,2023(www.justkannada.in): ಬಜೆಟ್​​ನಲ್ಲಿ ಹೇಳಿದಂತೆ ಮಹದಾಯಿ ಯೋಜನೆ ಜಾರಿ ಮಾಡಬೇಕು ಎಂದು ಶಾಸಕ ಎನ್​​.ಹೆಚ್​​​.ಕೋನರೆಡ್ಡಿ ಒತ್ತಾಯಿಸಿದ್ದಾರೆ.

ಮಹದಾಯಿ ಯೋಜನೆ ಬಗ್ಗೆ ಶಾಸಕ ಎನ್​​.ಹೆಚ್​​​.ಕೋನರೆಡ್ಡಿ ಪ್ರಸ್ತಾಪ ಮಾಡಿದ್ದು, ಬಜೆಟ್​​ನಲ್ಲಿ ಹೇಳಿದಂತೆ ಮಹದಾಯಿ ಯೋಜನೆ ಜಾರಿ ಮಾಡಬೇಕು. ಮಹದಾಯಿ ಯೋಜನೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ಸಿಎಂ ಮಹದಾಯಿ ಯೋಜನೆ ಜಾರಿ ಮಾಡುವ ಭರವಸೆ ಕೊಡಬೇಕು ಎಂದು ಮನವಿ ಮಾಡಿದರು.

ಬಸವರಾಜ ಬೊಮ್ಮಾಯಿ ಅವರು ಯೋಜನೆ ಜಾರಿ ಮಾಡುತ್ತಾರೆ ಎಂದು ತಿಳಿದಿದ್ದೆ. ಈ ಹಿಂದೆ ಯೋಜನೆ ಜಾರಿಗೆ ಆಗ್ರಹಿಸಿ ಅವರು ಪಾದಯಾತ್ರೆ ಮಾಡಿದ್ದರು. ನಾನೂ ಕೂಡ ಬಿಜೆಪಿಯವರ ಜೊತೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೆ. ಆದರೆ ಬೊಮ್ಮಾಯಿ ಮಹದಾಯಿ ಯೋಜನೆ ಜಾರಿ ಮಾಡಲಿಲ್ಲ. ಉತ್ತರ ಕರ್ನಾಟಕ ಭಾಗದ ಜನ ಸಿದ್ದರಾಮಯ್ಯ ಮೇಲೆ ಭರವಸೆ ಇಟ್ಟಿದ್ದಾರೆ. ಈ ಯೋಜನೆ ಜಾರಿ ಮೂಲಕ ಸಿಎಂ ಒಂದು ಹೊಸ ಸಂದೇಶ ಕೊಡಬೇಕು. ಕಿತ್ತೂರು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಆದ್ಯತೆ ನೀಡಬೇಕು  ಎಂದು ಶಾಸಕ ಎನ್.ಎಚ್ ಕೋನರೆಡ್ಡಿ  ತಿಳಿಸಿದರು.

Key words: Implement – Mahadayi Yojana – budget-MLA- NH Konareddy