Monday, August 3, 2026

BDA Apartments

Home Front Page ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10ರಷ್ಟು ಲಾಭ ಹೆಚ್ಚಳ- ಸಚಿವ ಗೋಪಾಲಯ್ಯ.

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10ರಷ್ಟು ಲಾಭ ಹೆಚ್ಚಳ- ಸಚಿವ ಗೋಪಾಲಯ್ಯ.

ಬೆಂಗಳೂರು,ಜೂನ್,21,2021(www.justkannada.in): ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.jk

ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಸ್ಥಳೀಯ ಶಾಸಕರೂ ಹಾಗೂ ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿದರು,

ಕೋವಿಡ್ ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ 4500 ಕೋಟಿ ವರಮಾನ ಬಂದಿದ್ದು, ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಹೆಚ್ಚು ಲಾಭ ಬಂದಂತಾಗಿದೆ ಎಂದು  ಸಚಿವ ನಾರಾಯಣಗೌಡ ಮಾಹಿತಿ ನೀಡಿದರು.

ಲಾಕ್ ಡೌನ್ ಸಡಿಲಿಕೆ ಬಗ್ಗೆ ಮುಖ್ಯಮಂತ್ರಿಗಳು ಹೇಳಿರುವಂತೆ ಕಾನೂನು ಇಡೀ ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ ಎಂದು ಹೇಳಿದ ಸಚಿವ ಗೋಪಾಲಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಕೋವಿಡ್ ಲಸಿಕಾ ದಿನದ ಅಂಗವಾಗಿ ಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ವ್ಯಾಪ್ತಿಯಲ್ಲಿ 3 ಸಾವಿರ ಮಂದಿಗೆ ಲಸಿಕೆ ಹಾಕಲಾಗುತ್ತಿದೆ ಎಂದು ಹೇಳಿದರು.

ವಿಶ್ವ ಯೋಗ ದಿನವಾದ ಇಂದು ಪ್ರಧಾನಿ ಮೋದಿ ಪ್ರೇರಣೆ ಮೇರೆಗೆ 175 ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದ ಸಚಿವರು ಯೋಗ ಮಾಡುವುದರಿಂದ ಕೋವಿಡ್ ನಂತಹ ಮಾರಕ ರೋಗಗಳನ್ನು ಹತ್ತಿಕ್ಕಲಾಗುವುದು ಎಂದು ಅಭಿಪ್ರಾಯಪಟ್ಟರು.

ಎಂಪಿಎಲ್ ಸ್ಪೋರ್ಟ್ಸ್ ಸಂಸ್ಥೆ ಇಂದಿನ ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದೆ.ದೊಡ್ಡ ದೊಡ್ಡ ಸಂಸ್ಥೆಗಳು ಸಿಎಸ್ ಆರ್ ಫಂಡ್ ನ ಮೂಲಕ ಜನ ಸೇವೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ಲಸಿಕೆ ಅಭಿಯಾನದಲ್ಲಿ ಸಾವಿರಾರು ಜನ ಹೆಸರು ನೋಂದಾಯಿಸಿಕೊಂಡು ಕೋವ್ಯಾಕ್ಸಿನ್ ಲಸಿಕೆ ಪಡೆಯುತ್ತಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ವ್ಯಾಕ್ಸಿನೇಷನ್‌ ಆದವರಿಗೆ ಕೆಲ ನಿಮಿಷ ವಿಶ್ರಾಂತಿ ಪಡೆಯಲು ಸಹ ಸೌಲಭ್ಯ ಕಲ್ಪಿಸಲಾಗಿತ್ತು.

ಶಾಸಕರ ಭವನ ಹಾಗೂ ನಾಗಪುರ ವಾರ್ಡ್ ನ ಬಿಬಿಎಂಪಿ ಕಚೇರಿ ಆವರಣದಲ್ಲಿ ಬೃಹತ್ ಶಾಮಿಯಾನಗಳನ್ನು ಹಾಕಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಸಾಲುಗಳನ್ನು ಮಾಡಿ ವ್ಯಾಕ್ಸಿನೇಷನ್‌ ಗೆ ಆಯೋಜನೆ  ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಅಧ್ಯಕ್ಷ ನೆಲ ನರೇಂದ್ರ ಬಾಬು  ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮಾಜಿ ಉಪ ಮೇಯರ್ ಹರೀಶ್ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಸಹ ಅಭಿಯಾನದಲ್ಲಿ ಭಾಗವಹಿಸಿದ್ದವು.

Key words: Increase -profit – 10% – Excise Department –Lockdown- Minister Gopalaiah