Thursday, August 6, 2026

BDA Apartments

Home Front Page ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ: ಇಂಡಿಯಾ ಕೂಟ ಒಟ್ಟಾಗಿರಲು ಪ್ರಯತ್ನ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ: ಇಂಡಿಯಾ ಕೂಟ ಒಟ್ಟಾಗಿರಲು ಪ್ರಯತ್ನ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.  

ಕಲಬುರಗಿ, ಜನವರಿ 27,2024(www.justkannada.in): ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ ಬರೆದಿದ್ದೇನೆ. ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಇಂಡಿಯಾ ಕೂಟದ ನಾಯಕರು ಒಟ್ಟಾಗಿರುಲು ಪ್ರಯತ್ನ ಮಾಡುತ್ತೇವೆ ಪ್ರಜಾಪ್ರಭುತ್ವ ಉಳಿಯಬೇಕು ಅಂದರೆ ನಾವು ಒಗ್ಗಟ್ಟಾಗಿರಬೇಕು ಎಂದರು.

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ. ಮೈತ್ರಿಕೂಟದಿಂದ ಎಲ್ಲಾ ಸ್ಪರ್ಧಿಸಿದರೇ ಒಳ್ಳೆಯದಾಗುತ್ತೆ. ಈ ಬಗ್ಗೆ ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

Key words: India alliance-trying-together – AICC president -Mallikarjuna Kharge.