Saturday, August 1, 2026

BDA Apartments

Home Front Page ಮಂಗಳ-ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ: ಇಸ್ರೋ ಅಧ್ಯಕ್ಷ ಸೋಮನಾಥ್

ಮಂಗಳ-ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ: ಇಸ್ರೋ ಅಧ್ಯಕ್ಷ ಸೋಮನಾಥ್

ಬೆಂಗಳೂರು, ಆಗಸ್ಟ್ 27, 08,2023 (www.justkannada.in): ಭಾರತ ಚಂದ್ರ, ಮಂಗಳ ಮತ್ತು ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.

ನಾವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕಾಗಿದೆ. ನಮಗೆ ಹೆಚ್ಚಿನ ಹೂಡಿಕೆಯ ಅಗತ್ಯವಿದೆ. ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಬೇಕು. ಇದರಿಂದ ಇಡೀ ರಾಷ್ಟ್ರವು ಅಭಿವೃದ್ಧಿ ಹೊಂದುತ್ತದೆ, ಅದು ನಮ್ಮ ಧ್ಯೇಯವಾಗಿದೆ ಎಂದು ಎಸ್ ಸೋಮನಾಥ್ ಹೇಳಿದ್ದಾರೆ.

ಚಂದ್ರನ ಅಜ್ಞಾತ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ನ್ನು ಯಶಸ್ವಿಯಾಗಿ ಇರಿಸಿದ ನಂತರ ಇಸ್ರೊದ ದೇಶದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ಸಿದ್ಧವಾಗಿದ್ದು, ಉಡಾವಣೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆದಿತ್ಯ ಎಲ್1 ಉಪಗ್ರಹ ಸಿದ್ಧವಾಗಿದೆ. ಇದು ಶ್ರೀಹರಿಕೋಟಾ ತಲುಪಿದ್ದು PSLV ಗೆ ಸಂಪರ್ಕ ಹೊಂದಿದೆ. ಇಸ್ರೊ ಮತ್ತು ದೇಶದ ಮುಂದಿನ ಗುರಿ ಅದರ ಉಡಾವಣೆಯಾಗಿದೆ. ಉಡಾವಣೆ ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.