ಬೆದರಿಕೆ ಪತ್ರ ಬಂದ ಸಾಹಿತಿಗಳಿಗೆ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ- ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು,ಆಗಸ್ಟ್,17,2023(www.justkannada.in): 15ಕ್ಕೂ ಹೆಚ್ಚು ಪ್ರಗತಿಪರರು, ಬುದ್ದಿಜೀವಿಗಳಿಗೆ ಬೆದರಿಕೆ  ಪತ್ರ ವಿಚಾರಕ್ಕೆ ಸಂಬಂಧ  ಬೆದರಿಕೆ ಪತ್ರ ಬಂದ ಸಾಹಿತಿಗಳಿಗೆ ರಕ್ಷಣೆ ನೀಡುವಂತೆ ಕಮಿಷನರ್, ಡಿಜಿಪಿಗೆ  ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್,  ಪ್ರಗತಿಪರರು, ಸಾಹಿತಿಗಳಿಗೆ ಅಪರಿಚಿತರಿಂದ ಜೀವ ಬೆದರಿಕೆ ಪತ್ರ ವಿಚಾರ ‘ಕೆಲ‌ ಸಾಹಿತಿಗಳು ಸಮಯ ಕೇಳಿದ್ದಾರೆ, ಸಮಯ ನೀಡಿ ಭೇಟಿಯಾಗುತ್ತೇನೆ ಎಂದು ಹೇಳಿದರು.

‘ಅವರು ಬರೆದ ಪತ್ರವನ್ನ ಡಿಜಿಪಿಗೆ ಕಳುಹಿಸಿಕೊಡ್ತೀನಿ. ನಾವು ಎಂಎಂ ಕಲ್ಬುರ್ಗಿ, ಗೌರಿಲಂಕೇಶ್ ಹತ್ಯೆ ಇನ್ನೂ ಮರೆತಿಲ್ಲ. ಅಂತಹ ಸಂದರ್ಭದಲ್ಲಿ  ಬೆದರಿಕೆ ಬಂದಿದೆ ಅಂದ್ರೆ ಗಂಭಿರವಾಗಿ ತೆಗೆದುಕೊಳ್ಳಬೇಕಾಗುತ್ತೆ. ಈಗಾಗಲೇ ಕಮಿಷನರ್, ಡಿಜಿಪಿಗೆ ರಕ್ಷಣೆ ನೀಡುವಂತೆ ಸೂಚನೆ ಕೊಟ್ಟಿದ್ದೇನೆ  ಎಂದು ಪರಮೇಶ್ವರ್ ಹೇಳಿದರು.

Key words: instructed -protect – writers who – threatening –letters-Home Minister -Dr. G. Parameshwar