ಕಲಬುರುಗಿ,ಜೂನ್,13,2025 (www.justkannada.in): ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Key words: Plane crash, Ishwar Khandre, demands, resignation, Union Aviation Minister