ರಾಯರ ಸನ್ನಿಧಿಯಲ್ಲಿ ಜನ್ಮ ದಿನ ಆಚರಿಸಿಕೊಂಡ ನವರಸ ನಾಯಕ !

ಬೆಂಗಳೂರು, ಮಾರ್ಚ್ 17, 2020 (www.justkannada.in): ನವರಸ ನಾಯಕ ಜಗ್ಗೇಶ್ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. ಎಂದಿನಂತೆ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.

ಜಗ್ಗೇಶ್ ರಾಘವೇಂದ್ರ ಸ್ವಾಮಿ ಭಕ್ತರು. ಪ್ರತಿವರ್ಷ ಹುಟ್ಟುಹಬ್ಬಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಸನ್ನಿಧಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ಈ ಬಾರಿಯೂ ಸಹ ನವರಸನಾಯಕ ಮಂತ್ರಾಲಯದಲ್ಲಿ ಇದ್ದಾರೆ.

57ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಜಗ್ಗೇಶ್ ಇಂದು ಗುರು ರಾಯರ ಸನ್ನಿಧಿಯಲ್ಲಿ ರಾಯರ ನೆನೆದು ಧನ್ಯರಾಗಿದ್ದಾರೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಅವರು ಬರೆದುಕೊಂಡಿದ್ದಾರೆ.