Thursday, August 13, 2026

BDA Apartments

Home Front Page ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’

ಬೆಂಗಳೂರು, ಸೆಪ್ಟೆಂಬರ್ 17, 2023 (www.justkannada.in): ಇನ್ನು ಮುಂದೆ ಪ್ರತಿ ತಿಂಗಳು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಹೌದು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸಲು ಪ್ರತಿ ತಿಂಗಳು ಜಿಲ್ಲಾಮಟ್ಟದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ಎಲ್ಲ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ 25ರಂದು ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯಾ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ಜನತಾ ದರ್ಶನ ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಆಯಾ ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮನ್ವಯ ಸಾಧಿಸಿಕೊಂಡು ಜನತಾ ದರ್ಶನಕ್ಕೆ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು.ಈ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮುಂಚಿತವಾಗಿ ಪ್ರಚಾರ ನಡೆಸಬೇಕು ಎಂದು ತಿಳಿಸಿದ್ದಾರೆ.