ಮೈತ್ರಿ ಬಳಿಕ ಪಕ್ಷ ಉಳಿಯುತ್ತೋ ಇಲ್ಲವೋ ಗೊತ್ತಿಲ್ಲ: ಆಲ್ ದಿ ಬೆಸ್ಟ್- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್.

ಬೆಂಗಳೂರು,ಸೆಪ್ಟಂಬರ್,8,2023(www.justkannada.in): ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ನಾಯಕರು ಸುಳಿವು ನೀಡಿದ ಬೆನ್ನಲ್ಲೆ ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಎರಡೂ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಡಿ.ಕೆ ಶಿವಕುಮಾರ್, ಬಿಜೆಪಿ – ಜೆಡಿಎಸ್‌ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುವುದಾದರೆ ಬಹಳ ಸಂತೋಷ. ಆದರೆ ಮೈತ್ರಿಯಾದ ನಂತರ ಜೆಡಿಎಸ್‌ ತನ್ನ ಸಿದ್ಧಾಂತ ಹೇಗೆ ಉಳಿಸಿಕೊಳ್ಳುತ್ತದೆ ಗೊತ್ತಿಲ್ಲ, ಪಕ್ಷ ಉಳಿಯುತ್ತೋ ಇಲ್ಲವೋ ಗೊತ್ತಿಲ್ಲ. ಅವರ ಮೈತ್ರಿಗೆ ನನ್ನ ವಿರೋಧವಂತೂ ಇಲ್ಲ. ಅವರಿಗೆ ಆಲ್‌ ದಿ ಬೆಸ್ಟ್‌ ಎಂದು ಹೇಳುವ ಮೂಲಕ ಜೆಡಿಎಸ್ ಕಾಲೆಳೆದಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಕೇಂದ್ರಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ. ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು.

Key words:  jds-bjp- alliance- DCM -DK Shivakumar- Tong.