Thursday, September 10, 2026

BDA Apartments

Home Front Page ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

ಬೆಂಗಳೂರು,ಜುಲೈ,18,2026 (www.justkannada.in): ಬಿಡದಿ ಟೌನ್‌ ಶಿಪ್‌  ಯೋಜನೆ ವಿರೋಧಿಸಿ  ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿವೆ.

ಬಿಡದಿ ಟೌನ್‌ಶಿಪ್ ಯೋಜನೆಯ ವಿರುದ್ಧ ನಿನ್ನೆ ಬಿಜೆಪಿ ಪಾದಯಾತ್ರೆ ಘೋಷಣೆ ಮಾಡಿತ್ತು. ಈ ಬೆನ್ನಲ್ಲೆ ಇದೀಗ ಜೆಡಿಎಸ್ ಮೂರು ದಿನಗಳ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಈ ಪಾದಯಾತ್ರೆ ನಡೆಯಲಿದೆ. ಜುಲೈ 30, 31 ಮತ್ತು ಆಗಸ್ಟ್ 1 ರಂದು  ಪಾದಯಾತ್ರೆ ನಡೆಯಲಿದೆ ಎಂದು ಘೋಷಣೆ ಮಾಡಿದೆ.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣ ರೆಡ್ಡಿ, ಸುದ್ದಿಗೋಷ್ಠಿ ನಡೆಸಿ ಈ ಪಾದಯಾತ್ರೆ ಬಗ್ಗೆ ಘೋಷಣೆ ಮಾಡಿದ್ದಾರೆ. ಪಾದಯಾತ್ರೆಗೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದು,  ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಯ ನೇತೃತ್ವ ವಹಿಸುತ್ತಾರೆ ಎಂದಿದ್ದಾರೆ.

‘ಬಿಡದಿ ಟೌನ್‌ಶಿಪ್ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ. ಸರ್ಕಾರ ಉನ್ನತ ಮಟ್ಟದ ಕಮಿಟಿ ರಚಿಸುವುದಾಗಿ ಹೇಳಿತ್ತು. ಅದರೆ  ಫೈನಲ್ ನೋಟಿಫಿಕೇಷನ್ ಹೊರಡಿಸಿದೆ. ಇದಕ್ಕೆ ವಿರೋಧಿಸಿ ಪಾದಯಾತ್ರೆಗೆ ಮುಂದಾಗಿದ್ದೇವೆ ಎಂದರು.

Key words: JDS, Padayatre, July 30, against, Bidadi Township