ಎಚ್.ವಿಶ್ವನಾಥ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಆಕ್ರೋಶ: ಹುಣಸೂರಿನಲ್ಲಿ ಪ್ರತಿಭಟನೆ

ಮೈಸೂರು, ಜುಲೈ 07, 2019 (www.justkannada.in): ಶಾಸಕ ಸ್ಥಾನಕ್ಕೆ ಅಡಗೂರು ಎಚ್‌.ವಿಶ್ವನಾಥ್ ರಾಜೀನಾಮೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

ಪಕ್ಷದ ಕಾರ್ಯಕರ್ತರು ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಅವರು ಯಾರನ್ನು ಕೇಳಿ ರಾಜೀನಾಮೆ ಕೊಟ್ಟರು ?
ಗೆಲ್ಲೊಸೋಕೆ ನಾವು ಬೇಕು, ರಾಜೀನಾಮೆ ಕೊಡುವಾಗ ನಾವು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಣಸೂರಿನ ಜೆಡಿಎಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕನಿಷ್ಠ ಕಾರ್ಯಕರ್ತರ ಅಭಿಪ್ರಾಯ ಕೇಳದೇ ರಾಜೀನಾಮೆ ನೀಡಿದ್ದು ತಪ್ಪು ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.