ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

ನವದೆಹಲಿ ಫೆಬ್ರುವರಿ 17,2024(www.justkannada.in):   ಖ್ಯಾತ ಉರ್ದು ಕವಿ ಗುಲ್ಜಾರ್  ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಕುರಿತು  ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಗುಲ್ಜಾರ್ ಎಂಬ ಎರಡು ಭಾಷೆಗಳ ಖ್ಯಾತ ಬರಹಗಾರರಿಗೆ (2023 ಕ್ಕೆ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ ಮತ್ತು ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಅವರು ಒಬ್ಬರು ಎಂದು ಪರಿಗಣಿಸಲಾಗಿದೆ.

ಗುಲ್ಜಾರ್ ಅವರು ಈ ಹಿಂದೆ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇನ್ನು ಪ್ರಶಸ್ತಿಗೆ ಭಾಜನರಾದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ ಮತ್ತು 100 ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಜನಿಸಿದ 2 ತಿಂಗಳಲ್ಲೇ ದೃಷ್ಟಿ ಕಳೆದುಕೊಂಡ ಜಗದ್ಗುರು ರಾಮಭದ್ರಾಚಾರ್ಯರು ಅತ್ಯುತ್ತಮ ಶಿಕ್ಷಕ ಮತ್ತು ಸಂಸ್ಕೃತ ಭಾಷಾ ಪಂಡಿತರಾಗಿದ್ದಾರೆ.  ಜಗದ್ಗುರು ರಾಮಭದ್ರಾಚಾರ್ಯರಿಗೆ ಭಾರತ ಸರ್ಕಾರ 2015 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Key words: Jnanpeeth award – famous Urdu- poet -Gulzar – -Jagadguru Rambhadracharya.