ಮೈಸೂರು,ಜೂನ್,23,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ ನೀಡಲಾಗಿದ್ದು ಕನ್ನಡ ಪುಸಕ್ತ ಪ್ರಾಧಿಕಾರವು ಉಚಿತ ಪುಸ್ತಕಗಳನ್ನು ವಿತರಣೆ ಮಾಡಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಜೂನ್ 24ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಮ್ಮ ಸಂಘವೂ ಒಳಗೊಂಡಂತೆ ಶಾಲಾ ಕಾಲೇಜಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ನಾಡಿನ ಹೆಸರಾಂತ ಕವಿ ಡಾ. ಸಿ.ಪಿ. ಕೃಷ್ಣಕುಮಾರ್ ಉದ್ಘಾಟಿಸಲಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅವರು ಶಾಲಾ ಕಾಲೇಜಿಗೆ ಉಚಿತ ಪುಸ್ತಕಗಳನ್ನು ವಿತರಿಸಲಿದ್ದಾರೆ. ಪ್ರಾಧಿಕಾರದ ಆಡಳಿತಾಧಿಕಾರಿ ಎನ್. ಕರಿಯಪ್ಪ ಅವರು ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಮಾಡಲಿದ್ದಾರೆ.
Key words: Mysore, Journalists, library, reopens