Sunday, August 9, 2026

BDA Apartments

Home Front Page ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಬೆಂಗಳೂರು,ಜುಲೈ,7,2025 (www.justkannada.in): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25-07-2025 ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಟ್ https://sahithyaacademy.karnataka.gov.in  ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿ ತಿಳಿಸಿದೆ.vtu

Key words: Kannada literature, journalists, study camp,