ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ಎಂ.ಪಿ ಶಂಕರ್ ಅವರ ಮಡದಿ ನಿಧನ.

ಮೈಸೂರು,ಮೇ,10,2022(www.justkannada.in): ಕನ್ನಡ ಚಿತ್ರರಂಗದ ಖ್ಯಾತ ನಟ, ಚಿರಸ್ಮರಣೀಯ ಕಲಾವಿದ, ನಿರ್ಮಾಪಕ  ಎಂ.ಪಿ ಶಂಕರ್  ಅವರ ಮಡದಿ ಮಂಜುಳಾ ಶಂಕರ್ (75) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೈಸೂರಿನ ವಿಜಯನಗರದಲ್ಲಿರುವ ನಿವಾಸದಲ್ಲಿ ಮಂಜುಳ ಶಂಕರ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಮಂಜುಳ ಶಂಕರ್ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆ ವೇಳೆ ಅಂಜಿಯೋಗ್ರಾಮ್ ಮಾಡಿಸಲಾಗಿತ್ತು. ನಂತರ  ಬೈಪಾಸ್ ಸರ್ಜರಿಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.

ಮಂಜುಳ ಶಂಕರ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನವೇ ವಿದ್ಯಾರಣ್ಯಪುರಂ ಬಡಾವಣೆಯ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎಂ.ಪಿ ಶಂಕರ್ ಕನ್ನಡ ಚಿತ್ರರಂಗದ ದಿಗ್ಗಜರಲ್ಲಿ ಒಬ್ಬರು. ಇವರು ಅನೇಕ ಖಳನಾಯಕ ಪಾತ್ರಗಳಲ್ಲಿ ನಟಿಸಿದ್ದಾರೆ. ಸತ್ಯ ಹರಿಶ್ಚಂದ್ರ, ಶನಿಪ್ರಭಾವ, ಬಂಗಾರದ ಮನುಷ್ಯ, ಗಂಧದ ಗುಡಿ, ಭೂತಯ್ಯನ ಮಗ ಅಯ್ಯ ಮುಂತಾದ ಕೆಲವು ಪ್ರಮುಖ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಎಂ.ಪಿ.ಶಂಕರ್, ಶ್ರೇಷ್ಠ ಖಳನಾಯಕನೆಂದು ಹೆಸರುಮಾಡಿದ್ದರು. ಸತ್ಯ ಹರಿಶ್ಚಂದ್ರ ಚಿತ್ರದ `ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ..’ ಹಾಡಿನ ಮನೋಜ್ಞ ಅಭಿನಯಕ್ಕಾಗಿ ನೆನಪಾಗುವ ಎಂ.ಪಿ. ಶಂಕರ್, ಡಾ. ರಾಜ್, ನರಸಿಂಹರಾಜು, ದ್ವಾರಕೀಶ್, ವಿಷ್ಣುವರ್ಧನ್, ಕನ್ನಡ ಚಿತ್ರರಂಗದ ಅಗ್ರಜರೊಂದಿಗೆ ಆತ್ಮೀಯ ಒಡನಾಟ ಹೊಂದಿದವರಾಗಿದ್ದರು. ಇನ್ನು ಎಂ.ಪಿ ಶಂಕರ್ 2008ರಲ್ಲಿ ನಿಧನರಾಗಿದ್ದು ಅವರ ಕಲಾಸೇವೆ ಇಂದಿಗೂ ಚಿರಸ್ಮರಣೀಯವಾಗಿದೆ.

Key words: Kannada -film- actor -MP Shankar-wife-death

ENGLISH SUMMARY…

Popular Kannada cine actor Late M.P. Shankar’s wife no more
Mysuru, May 10, 2022 (www.justkannada.in): Sandalwood’s yesteryears popular actor M.P. Shankar’s wife, Manjula (75) passed away today in Mysuru, due to cardiac arrest.
She passed away at the residence in Vijayanagara, Mysuru. She suffered chest pain a few days ago and was hospitalized, where she underwent angiogram. A bypass surgery was also conducted, according to sources.
The last rites will be performed today afternoon at the funeral ground in Vidyaranyapuram, in Mysuru.
Keywords: Actor M.P. Shankar/ wife Manjula/ no more