ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನಿಸ್ವಾರ್ಥ ಹೋರಾಟ, ದೇಶಪ್ರೇಮ ಆದರ್ಶಪ್ರಾಯವಾದದ್ದು – ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜನವರಿ,26,2021(www.justkannada.in) : ಕನ್ನಡನಾಡಿನ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯತಿಥಿಯಂದು ಅವರಿಗೆ ಶತ ಶತ ಪ್ರಣಾಮಗಳು. ಅವರ ನಿಸ್ವಾರ್ಥ ಹೋರಾಟ, ದೇಶಪ್ರೇಮ ಆದರ್ಶಪ್ರಾಯವಾದದ್ದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.Kannada-proud son-Revolution-VeeraSangolikki rayanna-CM B.S.Yeddyurappa ಅಪ್ರತಿಮ ರಾಷ್ಟ್ರಪ್ರೇಮಿ, ದಿಟ್ಟ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ಬೆಂಗಳೂರು ನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ಅವರ ಪುತ್ಥಲಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. Kannada-proud son-Revolution-VeeraSangolikki rayanna-CM B.S.Yeddyurappa ರಾಯಣ್ಣನವರ ಆದರ್ಶಗಳು ಸಮಾಜಕ್ಕೆ ನಿರಂತರ ಪ್ರೇರಣೆ ನೀಡುತ್ತವೆ. ರಾಯಣ್ಣನವರ ನಿಷ್ಠೆ, ಧೈರ್ಯ, ಪರಾಕ್ರಮ, ತ್ಯಾಗ ಬಲಿದಾನಗಳನ್ನು ನಾಡು ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

key words : Kannada-proud son-Revolution-Veera
Sangolikki rayanna-CM B.S.Yeddyurappa