ಕರ್ನಾಟಕ-ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ: ತಮಿಳು ಚಿತ್ರಗಳ ಬಿಡುಗಡೆ ಮಾಡದಂತೆ ಆಕ್ರೋಶ.

ಬೆಂಗಳೂರು,ಸೆಪ್ಟಂಬರ್,23,2023(www.justkannada.in) ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು  ಕರ್ನಾಟಕ-ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕರವೇ ರಾಜ್ಯಾಧ್ಯಕ್ಷ  ಪ್ರವೀಣ್ ಶೆಟ್ಟಿ ಬಣದಿಂದ    ಹೊಸೂರು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ  ವ್ಯಕ್ತಪಡಿಸಿದರು.

ಗಡಿ ಗೋಪುರದ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು,  ಕರ್ನಾಟಕದಲ್ಲಿ ತಮಿಳು ಚಿತ್ರಗಳು ಬಿಡುಗಡೆಯಾಗಬಾರದು. ಸಮಸ್ಯೆ ಬಗೆ ಹರಿಯೋ ಬರೆಗೂ ಚಿತ್ರಮಂದಿರಗಳಲ್ಲಿ ತಮಿಳು ಸಿನಿಮಾ ಪ್ರದರ್ಶನ ರದ್ದಾಗಬೇಕು  ಎಂದು ಆಕ್ರೊಶ ಹೊರ ಹಾಕಿದರು. ಪೊಲೀಸರು ಪ್ರತಿಭಟನಾಕಾರರನ್ನ ತಡೆ ಹಿಡಿದು ವಶಕ್ಕೆ ಪಡೆದರು.

ಇತ್ತ ಮಲ್ಲೇಶ್ವರಂನಲ್ಲಿಯೂ  ಕರ್ನಾಟಕ  ರಕ್ಷಣಾ ವೇದಿಕೆ ಕಾರ್ಯಕರ್ತರು  ಪ್ರತಭಟನೆ ನಡೆಸಿದ್ದು, ಚಪ್ಪಡಿ ಕಲ್ಲು ಹೊತ್ತು ಖಾಲಿ ಕೊಡ ಹಿಡಿದು  ಆಕ್ರೋಶ ವ್ಯಕ್ತಪಡಿಸಿದರು.

Key words: Karnataka-Tamil Nadu- border –bandh- protest-caveri fight