Saturday, August 15, 2026

BDA Apartments

Home Cinema ಕಾವೇರಿ ನಮ್ಮದು: ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ನಟ ಪ್ರೇಮ್

ಕಾವೇರಿ ನಮ್ಮದು: ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ನಟ ಪ್ರೇಮ್

ಬೆಂಗಳೂರು, ಅಕ್ಟೋಬರ್ 01, 2023 (www.justkannada.in): ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ನಟ ಪ್ರೇಮ್ ಒತ್ತಾಯಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿದ್ದು, ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೊದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಪ್ರೇಮ್ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿವೆ. ಇದರ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.