ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಏ.11 ರವರೆಗೆ ಅವಕಾಶ-ಕೆ ಎಂ ಗಾಯಿತ್ರಿ.

ಮೈಸೂರು.ಏ.4(www.justkannada.in): ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್ 11 ರವರೆಗೆ ಅವಕಾಶವಿದ್ದು, ತಡ ಮಾಡದೆ ಬಂದ ಅರ್ಜಿಗಳನ್ನು ಸ್ವೀಕರಿಸಿ ಈ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ ಎಂ ಗಾಯಿತ್ರಿ ಅವರು ತಿಳಿಸಿದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬOಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹುಣಸೂರು ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟಾಟಿಸ್ಟಿಕ್ ಸರ್ವೇಲೆನ್ಸ್ ತಂಡದ ಸದಸ್ಯರುಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾದರಿ ನೀತಿ ಸಂಹಿತೆ ಸಮಿತಿಯ ವತಿಯಿಂದ ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.

ಸೆಕ್ಟರ್ ಆಫೀಸರ್ಗಳು ಬೂತ್ ಲೆವೆಲ್ ಆಫೀಸರ್ಗಳೊಟ್ಟಿಗೆ ಸಂಪರ್ಕದಲ್ಲಿದ್ದು ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಪರಿಹರಿಸಬೇಕು. ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. ಪಾರ್ಟಿ ಮುಖಂಡರೊಡನೆ ಸಭೆ ನಡೆಸಿ ಅವರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12 ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಮೂಲಕ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ನಮ್ಮ ಕೈಗೊಳ್ಳಲಾಗುವುದು. ವಲ್ನರಬಲ್ ಹಾಗೂ ಕ್ರಿಟಿಕಲ್ ಪೋಲಿಂಗ್ ಸ್ಟೇಷನ್ಗಳನ್ನು ಗುರುತಿಸಿದ್ದು, ಅವುಗಳ ಸರಿಯಾದ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್,ರ್ಯಾಂಪ್ ಫ್ಯಾನ್ ಒಳಗೊಂಡOತೆ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು. ಇವಿಎಂ ಮತ್ತು ವಿವಿಪ್ಯಾಟ್ ಗಳ ನಿರ್ವಹಣೆಯಲ್ಲಿ ಅಥವಾ ಇವುಗಳ ಬಳಕೆಯಲ್ಲಿ ಸಮಸ್ಯೆಯಾದರೆ ರಿಪ್ಲೇಸ್ ಮಾಡಿಕೊಡಲಾಗುವುದು. ಯಾವುದೇ ಪಕ್ಷಗಳಿಗೆ ಸಂಬOಧಿಸದ ಎನ್, ಎಸ್. ಎಸ್ ಮತ್ತು ಎನ್ ಸಿ ಸಿ ಸ್ವಯಂಸೇವಕರನ್ನು ಚುನಾವಣಾ ಕಾರ್ಯದಲ್ಲಿ ಬಳಸಿಕೊಳ್ಳಬಹುದು. ಎಫ್ ಎಸ್ ಟಿ ಮತ್ತು ಎಸ್ ಎಸ್ ಟಿ ತಂಡದವರಿಗೆ ವಾಹನ ಪೂರೈಕೆ ಮಾಡಲು ಆರ್ ಒ ಮತ್ತು ಎಂ ಆರ್ ಒ ಗಳಿಗೆ ಸೂಚಿಸಿದರು.

ತರಬೇತಿಯಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ದೇವರಾಜ್, ಹುಣಸೂರು ಚುನಾವಣಾಧಿಕಾರಿಗಳಾದ ರುಚಿ ಬಿಂದಾಲ್ ಅವರನ್ನು ಒಳಗೊಂಡOತೆ ಇತರರು ಉಪಸ್ಥಿತರಿದ್ದರು.

key words: KM Gayatri – till -11th -add name – voter list.