ಯೋಧನ ಕುಟುಂಬದ ಮೇಲಿನ ಹಲ್ಲೆ ಖಂಡಿಸಿ ತೀವ್ರ ಪ್ರತಿಭಟನೆ.

ಕೊಡಗು,ಜುಲೈ,30,2021(www.justkannada.in): ಯೋಧನ ಕುಟುಂಬದ ಮೇಲಿನ ಹಲ್ಲೆ ಖಂಡಿಸಿ, ಮಡಿಕೇರಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಮಡಿಕೇರಿಯ ಜನರಲ್ ತಿಮ್ಮ‌ಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗಿದ್ದು ಪ್ರತಿಭಟನೆಯಲ್ಲಿ ಮಾಜಿ ಸೈನಿಕರ ಸಂಘ ಹಾಗೂ ಹಿಂದು ಪರ ಸಂಘಟನೆಗಳು ಸಾಥ್ ನೀಡಿದವು. ಹೀಗಾಗಿ ಜನರಲ್ ತಿಮ್ಮ‌ಯ್ಯ ವೃತ್ತದಲ್ಲಿ ಕೇಸರಿ ಬಾವುಟ ರಾರಾಜಿಸಿದವು.

ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು  ಆಗ್ರಹಿಸಿದ್ದಾರೆ.

Key words: kodagu- protest -condemnation –soldier-family-assult