ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ರಾಜೀನಾಮೆ: ಐವರು ಶಾಸಕರಿಂದ ಎಚ್ಚರಿಕೆ.

ಕೋಲಾರ,ಮಾರ್ಚ್,27,2024, (www.justkannada.in):  ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಗೆ ಕೋಲಾರ ಕ್ಷೇತ್ರದ ಟಿಕೆಟ್ ವಿಚಾರ ಕಗ್ಗಂಟಾಗಿದ್ದು ಈ ನಡುವೆ ಸಚಿವ ಕೆ.ಎಚ್ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ. ಆದರೆ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ರಾಜೀನಾಮೆ ನೀಡುವುದಾಗಿ ಕೋಲಾರ ಜಿಲ್ಲೆಯ ಐವರು ಶಾಸಕರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಸೂಕ್ತ ಅಭ್ಯರ್ಥಿಗೆ ಕೋಲಾರದ ಟಿಕೆಟ್ ನೀಡಿ.  ಕೆಎಚ್ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ಕೊಡುತ್ತೇವೆ ಎಂದು  ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಾಲೂರು ಶಾಸಕ ಕೆವೈ ನಂಜೇಗೌಡ. ಸಚಿವ ಎಂಸಿ ಸುಧಾಕರ್ ಹಾಗೂ ಪರಿಷತ್ ಸದಸ್ಯ ಅನಿಲ್ ಕುಮಾರ,  ನಜೀರ್ ಅಹ್ಮದ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಕೊತ್ತೂರು ಮಂಜುನಾಥ್,  ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಬಾರದು ಒಂದು ವೇಳೆ ಟಿಕೆಟ್ ನೀಡಿದ್ರೆ ರಾಜೀನಾಮೆ ನೀಡುತ್ತೇವೆ. ಸ್ಪೀಕರ್ ಭೇಟಿಗೆ ಸಮಯ ಕೇಳಿದ್ದೇವೆ.  ಬೆಂಗಳೂರಿನಿಂದ ಮಧ್ಯಾಹ್ನ 3ಗಂಟೆಗೆ ಪ್ರಯಾಣ ಬೆಳಸುತ್ತೇವೆ ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ನೀಡುತ್ತೇವೆ ಎಂದು ಕೊತ್ತೂರು ಮಂಜುನಾಥ್  ಹೇಳಿದ್ದಾರೆ.

Key words: kolar, Muniyappa,MLAs.