Wednesday, September 9, 2026

BDA Apartments

Home Crime KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಇಂದು ಇಬ್ಬರನ್ನು 1ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಸದ್ಯ ಕಸ್ಟಡಿ ಬೇಡ ಮುಂದೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಅಧಿಕಾರಿಗಳು ಹೇಳಿಕೆ ನೀಡಿದರು,

ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು.

Key words: KPSC scam, Judicial custody, Gyanendra, Basavaraj Kannale