Sunday, August 9, 2026

BDA Apartments

Home Front Page ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆ.ಎಸ್ ಈಶ್ವರಪ್ಪ ನಿರ್ಧಾರ.

ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆ.ಎಸ್ ಈಶ್ವರಪ್ಪ ನಿರ್ಧಾರ.

ಶಿವಮೊಗ್ಗ,ಮಾರ್ಚ್,16,2024(www.justkannada.in): ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ.

ಹೌದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ,  ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಪಕ್ಷ ಉಳಿಸಲು ನನ್ನ ಈ ಹೋರಾಟ ನಾನು ಹಿಂದುತ್ವ ಮೇಲೆ ಚುನವಣೆ ಮಾಡುತ್ತೇನೆ. ಬಿವೈ ರಾಘವೇಂದ್ರ ಲಿಂಗಾಯತ ಮೇಲೆ ಚುನಾವಣೆ ಮಾಡುತ್ತಾರೆ ಎಂದಿದ್ದಾರೆ.

Key words: KS Eshwarappa – decided – contest – independent-candidate – Shimoga constituency.