ಕೃಷಿಸಚಿವರನ್ನ ಸಂಪುಟದಿಂದ ಕೈಬಿಡಿ-ಸಿಎಂ ಸಿದ್ಧರಾಮಯ್ಯಗೆ ಕೆ.ಎಸ್ ಈಶ್ವರಪ್ಪ ಆಗ್ರಹ.

ಶಿವಮೊಗ್ಗ,ಆಗಸ್ಟ್,7,2023(www.justkannada.in): ಲಂಚಕ್ಕೆ ಬೇಡಿಕೆ ಆರೋಪದ ಮೇಲೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಮುಖ್ಯಮಂತ್ರಿಗಳು ಕೃಷಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಹಣ ಲೂಟಿ ಮಾಡಿರುವವರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಬಂದು ಮೂರು ತಿಂಗಳು ಆಗಿಲ್ಲ, ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ರೈತರಿಗೆ ಬಿಎಸ್​ ಯಡಿಯೂರಪ್ಪ ಅವರು ಕೊಟ್ಟ ಹಣ ವಾಪಸ್ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿಟ್ಟ ಬೇರೆ ಹಣ ಬಳಸುತ್ತಿದ್ದಾರೆ. ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿಎಂ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

Key words: KS Eshwarappa -demands -CM Siddaramaiah- resignation – Agriculture minister