ಕೆ.ಎಸ್ ಈಶ್ವರಪ್ಪ ಬಂಡಾಯ ವಿಚಾರ: ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಎಂದ ಬಿವೈ ವಿಜಯೇಂದ್ರ.

ಶಿವಮೊಗ್ಗ,ಮಾರ್ಚ್,18,2024(www.justkannada.in): ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ  ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ಸ್ಪರ್ಧಿಸಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ  ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,  ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಎಂದು ನುಡಿದಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಹೈಕಮಾಂಡ್ ಎಲ್ಲವನ್ನೂ ಪರಿಹರಿಸುತ್ತೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ. ಕೆಎಸ್  ಈಶ್ವರಪ್ಪ ಕಿವಿಗೆ ತಪ್ಪು ಮಾಹಿತಿ ಬಿದ್ದಿದೆ ಎಂದರು.

ಬಿಎಸ್  ಯಡಿಯೂರಪ್ಪ ಮಗ ಎಂಬ ಕಾರಣಕ್ಕೆ ನನಗೆ ಸ್ಥಾನ ಸಿಕ್ಕಿಲ್ಲ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ನನಗೂ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಹೈಕಮಾಂಡ್  ನಿರ್ಧಾರ ಒಪ್ಪಿಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words:  KS Eshwarappa -rebellion –issue-BJP-BY Vijayendra.