ಬೆಂಗಳೂರು,ಜೂನ್,7,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳಿಕ ‘ಕೆಎಸ್ ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ್ ರಾಜೀನಾಮೆ ನೀಡಿದ್ದಾರೆ.
ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅದೇ ರೀತಿ ಕೆಎಸ್ ಸಿಎ ಖಜಾಂಚಿ ಸ್ಥಾನಕ್ಕೆ ಜೈರಾಮ್ ಕೂಡ ರಾಜೀನಾಮೆ ನೀಡಿದ್ದಾರೆ. ಕೆಎಸ್ ಸಿಎ ಅಧ್ಯಕ್ಷರಿಗೆ ನಿನ್ನೆ ಇಬ್ಬರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನ ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಮಧ್ಯೆ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅಮಾನತು , ವರ್ಗಾವಣೆ ಮಾಡಿದೆ.
Key words: KSCA secretary, Shankar, Treasurer, Jairam , resigns